






ಬೆಂಗಳೂರು: 19 ವರ್ಷದೊಳಗಿನ ಭಾರತ ಕ್ರಿಕೆಟ್ ತಂಡಕ್ಕೆ ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರ ಮಗ ಸಮಿತ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ.
ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಮೊಟ್ಟ ಮೊದಲ ಬಾರಿಗೆ ನಾನು ಆಯ್ಕೆಯಾಗಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ಶುಭಾಶಯ ತಿಳಿಸಿದ ನಿಮ್ಮೆಲ್ಲರಿಗೆ ಧನ್ಯವಾದಗಳು. ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಇಲ್ಲಿಯವರೆಗೆ ಬರುವುದಕ್ಕೆ ನಾನು ತುಂಬಾ ಕಠಿಣ ಪರಿಶ್ರಮಪಟ್ಟಿದ್ದೇನೆ. ಎಲ್ಲಾ ಕನ್ನಡಿಗರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಬಿಸಿಸಿಐ ಸಮಿತ್ ದ್ರಾವಿಡ್ ಅವರನ್ನು ಆಯ್ಕೆ ಮಾಡಿದೆ.
18 ವರ್ಷದ ಸಮಿತ್ ವೇಗಿ ಬೌಲರ್ ಹಾಗೂ ಆಲ್ ರೌಂಡರ್ ಆಟಗಾರರಾಗಿದ್ದಾರೆ. ಕಳೆದ ವರ್ಷದ ದೇಶಿಯ ಮತ್ತು ಪ್ರಾದೇಶಿಕ ಕ್ರಿಕೆಟ್ ಆಟದಲ್ಲಿ ಸಮಿತ್ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಇತ್ತೀಚಿಗೆ ಕರ್ನಾಟಕದಲ್ಲಿ ನಡೆದ ಮಹರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಟವಾಡಿದ್ದು, ಈ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.