Sunday, June 29, 2025
spot_imgspot_img
spot_imgspot_img

*ಮಾಜಿ ಮೇಯರ್ ಸಂಪತ್‍ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿ- ಕೇರಳದ ಕಡೆ ಓಡಿ ಹೋಗಿರುವ ಸಾಧ್ಯತೆ.

- Advertisement -
- Advertisement -

ಬೆಂಗಳೂರು: ಡಿಜೆ ಹಳ್ಳಿ ಗಲಭೆಯ ಪ್ರಮುಖ ಆರೋಪಿಯಗಿರುವ ಮಾಜಿ ಮೇಯರ್ ಸಂಪತ್‍ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗಿ ಪರಾರಿ ಆಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಕೊರೊನಾ ಸೋಂಕು ತಗುಲಿದೆ ಎಂದು ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಸಂಪತ್ ರಾಜ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡೋ ಭಯದಲ್ಲಿ ಸಿನಿಮಾ ಶೈಲಿಯಲ್ಲಿ ರಾತ್ರೋರಾತ್ರಿ ಪರಾರಿಯಾಗಿದ್ದು, ಗುರುವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಸಿಬಿ ತಂಡಕ್ಕೆ ಶಾಕ್ ಆಗಿದೆ.

ಬುಧವಾರ ಮಧ್ಯರಾತ್ರಿಯೇ ಡಿಸ್‍ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಸಿಸಿಬಿ ಡಿಸ್ಚಾರ್ಜ್ ಮಾಡಿದ ಕಾರಣಕ್ಕೆ ಆಸ್ಪತ್ರೆಗೆ ನೋಟಿಸ್ ನೀಡಿ ಪರಿಶೀಲಿಸುತ್ತಿದೆ. ಸಂಪತ್ ರಾಜ್ ಕೇರಳದ ಕಡೆ ಓಡಿ ಹೋಗಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!