- Advertisement -
- Advertisement -
ನವದೆಹಲಿ: ಸೆಪ್ಟೆಂಬರ್ 14ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಪ್ರಶ್ನಾವಳಿಗೆ ಅವಧಿ ಇರುವುದಿಲ್ಲ ಎಂದು ರಾಜ್ಯಸಭಾ ಕಾರ್ಯಾಲಯ ತಿಳಿಸಿದೆ.
ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಅಧಿವೇಶನ ನಡೆಯಲಿದೆ. ಶನಿವಾರ, ಭಾನುವಾರ ಕೂಡ ರಜೆ ಇಲ್ಲದೆ ಪ್ರತಿದಿನ 4 ಗಂಟೆ ಅಧಿವೇಶನ ನಡೆಯಲಿದೆ. ಇನ್ನು ಸಂಸದರು ಅಧಿವೇಶನಕ್ಕೆ ಹಾಜರಾಗುವ ಮುನ್ನ ಕೊರೊನಾ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
- Advertisement -