Friday, April 26, 2024
spot_imgspot_img
spot_imgspot_img

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ: 71 ಲಕ್ಷ ರೂ. ಮೌಲ್ಯದ ಮರಳು ವಶಕ್ಕೆ.

- Advertisement -G L Acharya panikkar
- Advertisement -

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ಮಾಡಿ ಒಟ್ಟು 71,28,500 ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ‌.

2020 ಜುಲೈ ಮತ್ತು ಆಗಸ್ಟ್ ನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮರಳು ಅಡ್ಡೆಗಳಿಗೆ ದಾಳಿ ಮಾಡಲಾಗಿದ್ದು, ಒಟ್ಟು 13 ಪ್ರಕರಣಗಳನ್ನು ದಾಖಲಿಸಲಾಗಿದೆ. 10 ಆರೋಪಗಳನ್ನು ದಸ್ತಗಿರಿ ಮಾಡಿ 14 ಮರಳು ಸಾಗಾಟ ವಾಹನ ಮತ್ತು 2 ಡ್ರೆಜ್ಜಿಂಗ್ ಯಂತ್ರಗಳನ್ನು ಸ್ವಾಧೀನ ಪಡಿಸಿಕೊಂಡು 71,28,500 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮಾದಕ ದ್ರವ್ಯಗಳ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದು, 10 ಆರೋಪಿಗಳನ್ನು ದಸ್ತಗಿರಿ ಮಾಡಿ 14,80,000 ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತಗಳ ಮಾರಾಟ ಮತ್ತು ಸಾಗಾಟ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!