- Advertisement -
- Advertisement -




ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಅವ್ಯಾಚ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇಲೆ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿಯವರನ್ನು ಇಂದು ಮನೆಯಿಂದಲೇ ಬೆಳ್ಳಾರೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿರುವೆರು ಕುಡ್ಲ ಸಂಸ್ಥಾಪಕ ಉದಯ ಪೂಜಾರಿಯವರು ಸಾಮಾಜಿಕ ಜಾಲಾತಾಣದಲ್ಲಿ ನಾವು ನೋಡುತ್ತಿದ್ದೇವೆ. ಕೇವಲ ಬಿಲ್ಲವ ಸಮಾಜದ ಹೆಣ್ಣುಮಕ್ಕಳು ಅಲ್ಲ, ಯಾವುದೇ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಆ ರೀತಿ ಮಾತನಾಡಬಾರದು, ಖಂಡಿತವಾಗಿಯೂ ನಾವು ಇದನ್ನು ಖಂಡಿಸುತ್ತೇವೆ. ಸಂಜೀವ ಪೂಜಾರಿಯನ್ನು ತಕ್ಷಣ ಸರಕಾರಿ ಕೆಲಸದಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
- Advertisement -