- Advertisement -
- Advertisement -

ಪುತ್ತೂರು: ಅರಿಯಡ್ಕ ಗ್ರಾಮದ ಕೊಲ್ಲಾಜೆ ಎಂಬಲ್ಲಿ ಆ.8 ರಂದು ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಸರ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ತನ್ನ ಜುಪಿಟರ್ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಬೀದಿ ನಾಯಿಯೊಂದು ರಸ್ತೆಗೆ ಏಕಾಏಕಿ ಅಡ್ಡ ಬಂದು ಸ್ಕೂಟರ್ ಸವಾರ ಸರ್ವೆ ಗ್ರಾಮದ ಪರನೀರು ನಿವಾಸಿ ಪ್ರಶಾಂತ್ ರವರು ನಿಯಂತ್ರಣ ತಪ್ಪಿ ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯ ಹಾಗೂ ದೇಹದ ಇತರ ಭಾಗಗಳಿಗೆ ಗುದ್ದಿದ ಗಾಯವಾಗಿತ್ತು.
ಪ್ರಶಾಂತ್ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆಗಾಗಿ ಪುತ್ತೂರು ಮಹಾವೀರ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆ.18ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.




- Advertisement -