ನವದೆಹಲಿ(ನ.8): ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜಕೀಯದ ಅಂಗಣಕ್ಕೆ ಇಳಿಯಲಿದ್ದಾರೆ.
ನಾಳೆ ನವದೆಹಲಿಯಲ್ಲಿ ಅವರು ಅಧಿಕೃತವಾಗಿ ರಾಷ್ಟ್ರೀಯ ಪಕ್ಷ ಸೇರಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಆ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳಲಿದ್ದಾರೆ.ತಮಿಳುನಾಡು ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ತೊಡಗಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಷ್ಟ್ರೀಯ ಸ್ಥರದಲ್ಲಿ ಅವರಿಗೆ ಉತ್ತಮ ಸ್ಥಾನ ಸಿಗುವ ಸಾಧ್ಯತೆ ಇದೆ.
I would like to inform all that I have decided to join the Congress party in my effort to continue the fight. I have been an activist trying to be a voice for the less privileged all through my life, wherever I was and would continue the same until my last breath. pic.twitter.com/na3fMn4ueM
— sashikanth senthil (@s_kanth) November 8, 2020
ಇದೇ ವೇಳೆ ಅಣ್ಣಾಮಲೈ ಅವರಿಗೂ ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದ ಸ್ಥಾನಮಾನವನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.