- Advertisement -
- Advertisement -



ಮಳೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿರುವ ಹಿನ್ನಲೆ ಕೊಡಗು & ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ(ಜೂ.27)ಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನ ಎಲ್ಲ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.ಚಿಕ್ಕಮಗಳೂರಿನ ಶೃಂಗೇರಿ, ಕೊಪ್ಪ, ಎನ್ಆರ್ಪುರ, ಕಳಸ &ಮೂಡಿಗೆರೆ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಅಲ್ಲಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಮಾಡಿದ್ದಾರೆ.ಇಂದು ಕೂಡ ಎರಡು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು.
- Advertisement -








