Saturday, June 28, 2025
spot_imgspot_img
spot_imgspot_img

ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ-ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದು ಬೇಡ:-ಸಂಸದೆ ಶೋಭಾ ಕರಂದ್ಲಾಜೆ.

- Advertisement -
- Advertisement -

ಚಿಕ್ಕಮಗಳೂರು: ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ ಎಂದು ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದರು. ಹೀಗಾಗಿ ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣವೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೀಗಾಗಿ ಆನ್​ಲೈನ್ ಕ್ಲಾಸ್ ಮುಂದುವರೆಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಮೂಲಕ ಶಾಲೆ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ಪುನಾರಂಭಿಸುವುದು ಬೇಡ ಎಂದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಶಿಕ್ಷಕರ ಸಾವು ಸಂಭವಿಸಿದೆ, ಶಿಕ್ಷಕರು ದೇಶದ ಆಸ್ತಿ. ಶಿಕ್ಷಕರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಬೇಕು. ಶಿಕ್ಷಕರ ರಕ್ಷಣೆ, ಜೀವ ಉಳಿಸಲು ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ.ಅಲ್ಲದೇ, ಈ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವ ಸ್ಥಿತಿಯಲ್ಲಿಯೂ ಇಲ್ಲವೆಂದು ತಿಳಿಸಿದರು.

- Advertisement -

Related news

error: Content is protected !!