


ವಿಟ್ಲ: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದು ತನ್ನದೇ ಆದ ಗ್ರಾಹಕ ವರ್ಗವನ್ನು ಹೊಂದಿ ಮಿತ್ತೂರಿನಲ್ಲಿ ವಿಶ್ವಾಸನೀಯ ವ್ಯವಹಾರ ನಡೆಸುತ್ತಿದ್ದ ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಡಿ.೮ರಂದು ಶುಭಾರಂಭಗೊಳ್ಳಲಿದೆ.
ಇದೇ ಸಂದರ್ಭದಲ್ಲಿ ಭಾರತ್ ವೆಹಿಕಲ್ ಬಜಾರ್ ಸಂಸ್ಥೆಯ ೨ನೇ ವರ್ಷಾಚರಣೆ ಸಂಭ್ರಮ ಹಾಗೂ ಐಕ್ಯ ವೇದಿಕೆ ಕೊಡಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ಡ್ರಗ್ಸ್ ವಿರುದ್ದ ಜನಜಾಗೃತಿ, ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮ ಡಿ.೮ರಂದು ನಡೆಯಲಿದೆ.ಸಾಯಂಕಾಲ ೬.೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಲ್ಲಡ್ಕ ಜುಮಾ ಮಸೀದಿಯ ಕಾರ್ಯದರ್ಶಿ ಸಿದ್ದೀಕ್ ಪನಾಮ ಹಾಗೂ ಮುಸ್ಲಿಂ ಸಮಾಜ ಬಂಟ್ವಾಳ ಇದರ ಪ್ರ.ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ ಭಾಗವಹಿಸಲಿದ್ದಾರೆ.
ಸಾಧಕರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಆಳ್ವ ಅನಂತಾಡಿ, ಪ್ರಾಚ್ಯ ಪಚ್ಚೆ ವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತ ಪಂಡಿತ ಗಂಗಾಧರ ಕರಿಯ ಅನಂತಾಡಿ, ಪ್ರೌಢ ಶಾಲಾ ವಿಭಾಗದ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಪುನೀತ್ ಗೋಳಿಕಟ್ಟೆ ಅನಂತಾಡಿ, ೧೭ ವರ್ಷದ ವಯೋಮಿತಿಯ ವಾಲಿಬಾಲ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕೌಶಿಕ್ ಹೆಚ್ ಶೆಟ್ಟಿ ವಿಜಯನಗರ ಮಾವಿನಕಟ್ಟೆ, ಪ್ರೌಢ ಶಾಲಾ ವಿಭಾಗದ ಲಾಂಗ್ ಜಂಪ್ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಹಮ್ಮದ್ ಫೌಝನ್ ಪಾಟ್ರಕೋಡಿ ಮೊದಲಾದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಭಾರತ್ ವೆಹಿಕಲ್ ಬಜಾರ್ನ ಮಾಲಕ ಅಶ್ರಫ್ ಹಾಗೂ ಕೊಡಾಜೆ ಐಕ್ಯ ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ತಿಳಿಸಿದ್ದಾರೆ.ಕೈಗೆಟಕುವ ದರ – ವಿಶ್ವಾಸನೀಯ ವ್ಯವಹಾರಸಂಸ್ಥೆ ಎರಡು ವರುಷಗಳ ಹಿಂದೆ ಮಿತ್ತೂರು ಸಮೀಪ ಆರಂಭಗೊಂಡಿತ್ತು. ಸಂಸ್ಥೆಯಲ್ಲಿ ಸೆಕೆಂಡ್ ಹ್ಯಾಂಡ್ ಕಾರು, ದ್ವಿಚಕ್ರ ವಾಹನ ಸೇರಿದಂತೆ ಗೂಡ್ಸ್ ವಾಹನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಕೈಗೆಟಕುವ ಬೆಲೆಗಳಲ್ಲಿ ತಮ್ಮ ಇಷ್ಟದ ವಾಹನಗಳು ಇಲ್ಲಿ ಲಭ್ಯವಿದ್ದು, ಅಗತ್ಯವಿರುವ ಗ್ರಾಹಕರಿಗೆ ಸಾಲಸೌಲಭ್ಯವನ್ನು ಸಂಸ್ಥೆ ಮಾಡಿಕೊಡುತ್ತಿತ್ತ. ಆರಂಭದ ದಿನಗಳಿಂದಲೇ ಗ್ತಾಹಕರಿಂದ ಉತ್ತಮಪ್ರತಿಕ್ರೀಯೆ ವ್ಯಕ್ತವಾಗಿದ್ದು, ಬಹಳಷ್ಟು ಸಣ್ಣ ಅವಧಿಯಲ್ಲೇ ಗ್ರಾಹಕರ ವಿಶ್ವಾಸನೀಯ ಸಂಸ್ಥೆಯಾಗಿ ಬೆಳೆದುನಿಂತಿದೆ.