Friday, June 27, 2025
spot_imgspot_img
spot_imgspot_img

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನೆಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೇಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!