Friday, April 19, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ ಪೂಜಾ ಸೇವೆಗಳು ಆರಂಭ. ಸೆಪ್ಟೆಂಬರ್-14ರಿಂದ ಕೆಲವು ಷರತ್ತುಗಳು ಅನ್ವಯ.

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ:- ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಸೆಪ್ಟೆಂಬರ್ 14 ರಿಂದ (ಸೋಮವಾರ) ಆರಂಭವಾಗಲಿದೆ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ಪೂಜಾ ಸೇವೆಗಳ ನಿಯಮಗಳು ಈ ಕೆಳಗಿನಂತಿವೆ:

  • ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ.
  • ದೇವಾಲಯ ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ತೆರೆದಿರುತ್ತದೆ.
  • ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುವುದು.
  • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
  • ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುವುದು.
  • ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು.
- Advertisement -

Related news

error: Content is protected !!