Saturday, June 28, 2025
spot_imgspot_img
spot_imgspot_img

ಸುರತ್ಕಲ್ : ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಆರೋಪಿ ಶಾರಿಕ್‌ಗೆ ಜಾಮೀನು.!!

- Advertisement -
- Advertisement -

ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸದ್ಯ ಆರೋಪಿಗೆ ಜಾಮೀನು ದೊರಕಿದೆ.

ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ ಶಾರಿಕ್ ಹಾಗೂ ಆತನ ತಾಯಿ ನೂರ್‌ಜಹಾನ್ ಎಂಬವರು ಹಿಂದೂ ಯುವತಿಗೆ ಕಿರುಕುಳ ನೀಡುತ್ತಿದ್ದರು. ನಿರಂತರ ಕಿರುಕುಳದಿಂದ ಬೇಸತ್ತಿದ್ದಳು ಮತ್ತು ಆತ್ಮಹತ್ಯೆ ಯತ್ನ ಮಾಡಿದ್ದು, “ಅನ್ಯಮತೀಯನ ಕೈಯಲ್ಲಿ ಸಾಯುವುದಕ್ಕಿಂತ, ಈಗಲೇ ಸಾಯುತ್ತೇನೆ” ಎಂದು ಡೆತ್ ನೋಟ್ ಬರೆದಿದ್ದಾಳು. ಇದರಲ್ಲೂ ಶಾರಿಕ್ ಮತ್ತು ನೂರ್‌ಜಹಾನ ನನ್ನು ಬಿಡಬಾರದು ಎಂದು ಬರೆದಿದ್ದಳು.

ತೀವ್ರ ನೊಂದ ಮನಸ್ಥಿತಿಯಲ್ಲಿ, ಶಾರೀಕ್ ಮತ್ತು ಅವರ ತಾಯಿ ನೂರ್ ಜಹಾನ್ ರವರ ಕಿರುಕುಳದಿಂದ ಆತ್ಮಹತ್ಯೆಗೆ ತೀರ್ಮಾನಿಸಿರುವುದಾಗಿ ಪತ್ರ ಬರೆದು, 10 ಮಾತ್ರೆಗಳು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾರೀಕ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದರು, ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ, ನಂತರ ಆರೋಪಿ ಶಾರಿಕ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.

ಈ ಘಟನೆಯ ಬಳಿಕ, ಯುವತಿ ಮಾಹಿತಿ ನೀಡಿದ ಪ್ರಕಾರ, ಶಾರೀಕ್ ಅವರ ನಿರಂತರ ಕಿರುಕುಳದಿಂದ ತಾನು ಭೀತಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಆಧಾರದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 125/24 ಅನ್ನು ಭಾರತೀಯ ದಂಡ ಸಂಹಿತೆಯ 78(1)(I), 351(1 & 2) ಮತ್ತು 3(5) ಸೆಕ್ಷನ್ ಅಡಿಯಲ್ಲಿ ದೋಷಾರೋಪಣೆ ಮಾಡಿ ಶಾರೀಕನನ್ನು ಬಂಧಿಸಿದ್ದರು. ಸದ್ಯ ಆರೋಪಿಗೆ ಜಾಮೀನು ದೊರಕಿದೆ.

- Advertisement -

Related news

error: Content is protected !!