Wednesday, May 8, 2024
spot_imgspot_img
spot_imgspot_img

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಕುಸಿದು ಬಿದ್ದು ಮೃತ್ಯು..!

- Advertisement -G L Acharya panikkar
- Advertisement -

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ ಅಸ್ವಸ್ಥಳಾಗಿ ಕುಸಿದು ಬಿದ್ದಳು.

ಪದ್ಮಶ್ರೀ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯನ್ನು ಉಳಿಸಲಾಗಲಿಲ್ಲ. ದೇಹವನ್ನು ಪಂಪಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೋಲೀಸ್ ಮೂಲಗಳು ಮಗುವಿಗೆ ಈ ಹಿಂದೆ ಹೃದಯದ ಸಮಸ್ಯೆ ಇತ್ತು ಎಂದು ಹೇಳಿದ್ದು, ಶುಕ್ರವಾರ ರಾತ್ರಿಯಿಂದಲೇ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಯಾತ್ರಾರ್ಥಿಗಳ ನೂಕುನುಗ್ಗಲು ಕಂಡು ಬರುತ್ತಿದ್ದು, ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅನೇಕ ಯಾತ್ರಾರ್ಥಿಗಳು ಬೇಲಿಗಳನ್ನು ಮುರಿದು ಅರಣ್ಯ ಮಾರ್ಗಗಳ ಮೂಲಕ ದೇವಾಲಯವನ್ನು ಪ್ರವೇಶಿಸಲು ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದರಿಂದ ದೇವಾಲಯದಲ್ಲಿ ಪ್ರಯತ್ನಿಸಲಾಗಿದ್ದ ತಿರುಪತಿ ಮಾದರಿ ಸರತಿ ವ್ಯವಸ್ಥೆಯು ಸಂಪೂರ್ಣ ವಿಫಲವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!