Wednesday, May 1, 2024
spot_imgspot_img
spot_imgspot_img

ವಿಟ್ಲ: ಪಾತ್ರತೋಟ ನಿವಾಸಿ ಶರೀಫ್ ಅನಾರೋಗ್ಯದಿಂದ ನಿಧನ

- Advertisement -G L Acharya panikkar
- Advertisement -
vtv vitla

ವಿಟ್ಲ : ಕೆಲಿಂಜ ನಿವಾಸಿ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ಕೆಲಿಂಜ ಪಾತ್ರತೋಟ ನಿವಾಸಿ ಶರೀಫ್ (34)ಮೃತರು. ಶರೀಫ್ ಕಳೆದ ಕೆಲ ವರ್ಷಗಳಿಂದ ಎರಡೂ ಕಿಡ್ನಿ ವೈಫಲ್ಯವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆಯು ಕಂಡು ಬಂದಿತ್ತು. ಇದೀಗ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಶರೀಫ್ ಕುಟುಂಬಸ್ಥರ ಜೊತೆ ಜಾವಗಳ್ ದರ್ಗಾಕ್ಕೆ ತೆರಳಿದ್ದರು ಎನ್ನಲಾಗಿದೆ. ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಅರಸೀಕೆರೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

ಶರೀಫ್ ಮೃತದೇಹವನ್ನು ಕೆಲಿಂಜಕ್ಕೆ ತರಲಾಗುತ್ತಿದ್ದು, ಕೆಲಿಂಜ ಮಸೀದಿಯಲ್ಲಿ ಧಪನ ಕಾರ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!