- Advertisement -
- Advertisement -
ಹಾಸನ: ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಕೊಂಚವೇ ಯಾಮಾರಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು. ಅದೃಷ್ಟವಶಾತ್ ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ.
ಚಿತ್ರೀಕರಣಕ್ಕಾಗಿ ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ಈ ಬೆಂಕಿ ತಗುಲಿದೆ. ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ. ಜಿಲ್ಲೆಯ ಬೇಲೂರಿನಲ್ಲಿ ‘ಹೀರೋ’ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿತ್ತು.
- Advertisement -