Friday, May 23, 2025
spot_imgspot_img
spot_imgspot_img

ಶಿರಾಡಿ: ಕಾರು-ಲಾರಿ ನಡುವೆ ಢಿಕ್ಕಿ; ಓರ್ವ ಸಾವು..!

- Advertisement -
- Advertisement -

ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನುಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು (ಕೆಎ 53, ಎಂಎಚ್ 2048) ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ(ಕೆಎ 41, 4310) ನಡುವೆ ಬರ್ಚಿನಹಳ್ಳದಲ್ಲಿ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಅಬ್ದುಲ್ ಶಕ್ರು ಚೌಧರಿ ಎಂಬವರು ಮೃತಪಟ್ಟಿದ್ದಾರೆ. ಕಾರಿನಲ್ಲಿ ಮೃತರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು, ಮೊಮ್ಮಗ ಅನ್ನು ಎಂಬವರಿದ್ದು ಗಾಯಗೊಂಡಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!