Friday, April 19, 2024
spot_imgspot_img
spot_imgspot_img

ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ

- Advertisement -G L Acharya panikkar
- Advertisement -

ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ಪ್ರದೇಶದ ದೋಣಿಗಲ್ ನಲ್ಲಿ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ನಿರ್ಭಂದವನ್ನು ವಿಧಿಸಲಾಗಿತ್ತು. ಆದರೆ ಈಗ ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಎಂದು ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 (48) ರ ಮಾರನಹಳ್ಳಿಯಿಂದ ದೊಣಿಗಲ್‌ವರಗಿನ ಹಾಸನ ಜಿಲ್ಲಾ ವ್ಯಾಪ್ತಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸೆ. 28 ರಿಂದ ಜಾರಿಗೆ ಬರುವಂತೆ ಎಲ್ಲಾ ಬಗೆಯ ಲಘು ಹಾಗೂ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಮುಕ್ತಗೊಳಿಸಿದ್ದಾರೆ.

ಸಕಲೇಶಪುರ ಮೂಲಕ ಹೋಗುವ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ಬಿಸಲೆ ಘಾಟ್ ಮತ್ತು ಚಾರ್ಮಾಡಿ ಘಾಟ್ ರಸ್ತೆ ಬಳಸಲು ಸೂಚಿಸಲಾಗಿದ್ದರೂ ಭಾರೀ ಗಾತ್ರದ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಕಷ್ಟ ಸಾಧ್ಯವಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದಕ್ಕೀಗ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.

- Advertisement -

Related news

error: Content is protected !!