- Advertisement -
- Advertisement -
ಶಿರಸಿ: ಗುಡ್ಡದ ಮಣ್ಣು ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿಯಲ್ಲಿ ನಡೆದಿದೆ.
ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಹತ್ತಿರ ಒಳ ರಸ್ತೆಯಲ್ಲಿ ಘಟನೆ ನಡೆದಿದ್ದು ಮಂಜುನಾಥ ಭಟ್ಟ ಅನ್ನೋರ ತೋಟದಲ್ಲಿ ಕೆಲಸಕ್ಕೆಂದು ಏಳು ಮಂದಿ ಕಾರ್ಮಿಕರು ತೆರಳಿದ್ದರು. ಧರೆ ಅಗೆದು ತೋಟಕ್ಕೆ ಮಣ್ಣು ಹಾಕುತ್ತಿದ್ದ ವೇಳೆ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ.
ಈ ವೇಳೆ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ್ ಡೋಯಿಪಡೆ (18) ಹಾಗೂ ಮಾಳು ಡೋಯಿಪಡೆ (21) ಅವರ ಮೇಲೆ ಮಣ್ಣು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಗ್ಗಿಬಾಯಿ, ಸೋನಿ ಹಾಗೂ ಬೀರು ಎನ್ನುವವರು ಅಪಾಯದಿಂದ ಪಾರಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -