Sunday, May 25, 2025
spot_imgspot_img
spot_imgspot_img

ಶಿರೂರು ಗುಡ್ಡ ಕುಸಿತ ಪ್ರಕರಣ; ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

- Advertisement -
- Advertisement -

ಕಾರವಾರ: ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಲಾರಿಯಲ್ಲೇ ಅರ್ಜುನ್ ಶವ ಇರುವುದು ಕಂಡುಬಂದಿದೆ. ಕೆಲ ದಿನಗಳಿಂದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಪುನಃ ಆರಂಭವಾಗಿ ಕಳೆದ ಆರು ದಿನಗಳಿಂದ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಈ ವೇಳೆ ಅರ್ಜುನ್ ಹಾಗೂ ಲಾರಿ ಪತ್ತೆಯಾಗಿದೆ. ಗುಡ್ಡಕುಸಿತ ಭೀಕರತೆ ತೋರಿಸುತ್ತಿರುವ ಲಾರಿ ಗುಡ್ಡಕುಸಿತಕ್ಕೆ ಸಿಕ್ಕಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಣ್ಣಿನ ಒಳಗೆ ಸಿಲುಕಿರುವ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಹುಡುಕಾಟ ನಡೆಸಲಾಗಿತ್ತು. ಆದರೆ ಟ್ಯಾಂಕರ್‌ ಬಿಡಿಭಾಗಗಳು ದೊರಕಿದ್ದವು. ಹಿಂದೆಯೇ ಈ ಟ್ಯಾಂಕರ್‌ನ ಟ್ಯಾಂಕ್‌ ದೊರೆತಿತ್ತು. ಬಳಿಕ ಅರ್ಜುನ ಚಲಿಸುತ್ತಿದ್ದ ಭಾರತ ಬೆಂಜ್ ಲಾರಿಯಲ್ಲಿ ನಾಟಾ ತುಂಬಿದ್ದು, ಆರಂಭದಲ್ಲಿಯೇ ನಾಟಾದ ಒಂದು ತುಂಡು ದೊರೆತಿತ್ತು. ಹಾಗಾಗಿ ಅರ್ಜುನ ಅವರ ಲಾರಿಯೂ ಅದೇ ಸ್ಥಳದಲ್ಲಿ ಇರಬಹುದೆಂದು ಹೆಚ್ಚಿನ ಕಾರ್ಯಾಚರಣೆ ನಡೆಸಲಾಗಿತ್ತು.

- Advertisement -

Related news

error: Content is protected !!