Saturday, June 28, 2025
spot_imgspot_img
spot_imgspot_img

ಶಿರೂರು ಗುಡ್ಡ ಕುಸಿತ ದುರಂತ ; 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ ಬಿಡಿ ಭಾಗ ಪತ್ತೆ

- Advertisement -
- Advertisement -

ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ರವರಿಗಾಗಿ ಮುಳುಗು ತಜ್ಞರಿಂದ ಶೋಧಕಾರ್ಯ ನಡೆಯುತ್ತಿದೆ. ಈ ವೇಳೆ ನಾಪತ್ತೆಯಾಗಿದ್ದ ಲಾರಿಯ ಜಾಕ್ ಪತ್ತೆಯಾಗಿದೆ.

ಇನ್ನು ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಇಂದು(ಮಂಗಳವಾರ) ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿಯದು ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ. 29 ನೇ ದಿನ ಗಂಗಾವಳಿ ನದಿಯಲ್ಲಿ ಈಶ್ವರ ಮಲ್ಪೆ ತಂಡದಿಂದ ಶೋಧ ಕಾರ್ಯ ಮುಂದುವರೆದಿದ್ದು, ಲಾರಿಯ ಎರಡು ಬಿಡಿ ಭಾಗಗಳಾದ ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ.

ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಿದ್ದ ವೇಳೆ ಫೋಕ್ಲೇನ್ ಬಕೆಟ್​ಗೆ ಕಬ್ಬಿಣ ಬಡಿದಿತ್ತು. ಈ ಹಿನ್ನಲೆ ನದಿಯಲ್ಲಿ ವಾಹನ ಇದೆ ಎನ್ನಲಾಗಿತ್ತು. ಬಳಿಕ ಕಳೆದ ಜಲೈ 25 ಗಂಗಾವಳಿ ನದಿಯಲ್ಲಿ ಅರ್ಜುನ್ ಟ್ರಕ್​ನಲ್ಲಿದ್ದ ಅಕೇಶಿಯ ಮರದ ತುಂಡೊಂದು ಪತ್ತೆಯಾಗಿತ್ತು. ತೇಲಿಬಂದ ಅಕೇಶಿಯ ತುಂಡಲ್ಲಿ ಅರಣ್ಯ ಇಲಾಖೆಯ ಮಾರ್ಕ್​ ಇರುವುದರಿಂದ ಸ್ಥಳಕ್ಕೆ ಕಾಣೆಯಾದ ಟ್ರಕ್ ಚಾಲಕ ಅರ್ಜುನ್ ಕಡೆಯ ಟ್ರಕ್ ಮಾಲೀಕರು ತೆರಳಿ ದೃಢಪಡಿಸಿದ್ದರು. ಆ ಮೂಲಕ ಲಾರಿ ನದಿಯಲ್ಲಿಯೇ ಇರುವುದು ಖಚಿತವಾಗಿತ್ತು. ಇದೀಗ ಲಾರಿಯ ಜಾಕ್​ ಪತ್ತೆಯಾಗಿದೆ.

- Advertisement -

Related news

error: Content is protected !!