Sunday, June 29, 2025
spot_imgspot_img
spot_imgspot_img

ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ..!

- Advertisement -
- Advertisement -

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

ಒಂದೆಡೆ ಬಿಟ್ಟು ಬಿಡದ ಮಳೆ, ಮತ್ತೊಂದೆಡೆ ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣು. ಇದರ ನಡುವೆ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡುತ್ತಿದೆ ರಕ್ಷಣಾ ತಂಡ. ಈಗ ಸಣ್ಣಿ ಹನುಮಂತ ಗೌಡ (67) ಮಹಿಳೆ ಶವ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನೂ ಮೂವರಿಗೆ ಶೋಧ ಕಾರ್ಯ ಮುಂದುವರಿದಿದೆ.

ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಯಿತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಅವರಲ್ಲಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

- Advertisement -

Related news

error: Content is protected !!