- Advertisement -
- Advertisement -



ಶಿರ್ವ: ವ್ಯಕ್ತಿಯೋರ್ವರು ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ನಡೀಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್ ಕಬ್ಬಿಣದ ಸಲಾಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್ ವಯರ್ ತಗುಲಿ ಈ ಅವಘಡ ಸಂಭವಿಸಿದೆ. ಮನೆಯ ಯಜಮಾನ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದೆ.
- Advertisement -








