Friday, April 26, 2024
spot_imgspot_img
spot_imgspot_img

ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ ಯುವಕನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

- Advertisement -G L Acharya panikkar
- Advertisement -

ಶಿವಮೊಗ್ಗ: ತನ್ನನ್ನು ಪ್ರೀತಿ ಮಾಡುವಂತೆ ಬೆನ್ನಿಗೆ ಬಿದ್ದಿದ್ದ ಯುವಕನಿಂದ ಬೇಸತ್ತು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕರಿಮನೆ ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ಸಹನಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸಹನಾ ಹೊಸ ನಗರದ ಹೋಲಿ ರೆಡಿಮೆಡ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಆರೋಪಿ ಪ್ರಶಾಂತ್ ಕನ್ನಳ್ಳಿಯ ನಿವಾಸಿಯಾಗಿದ್ದು, ತನ್ನನ್ನು ಪ್ರೀತಿಸುವಂತೆ ಸಹಾನ ಫೋನ್‍ಗೆ ಕರೆ ಮಾಡಿ ಪದೇ ಪದೇ ಪೀಡಿಸುತ್ತಿದ್ದ. ಈ ಬಗ್ಗೆ ಮೃತ ಸಹನಾ ಕೂಡ ತನ್ನ ತಾಯಿಯ ಜೊತೆ ಹೇಳಿಕೊಂಡಿದ್ದಳು.

ಬಳಿಕ ಸಹನಾಳ ತಂದೆ ತಾಯಿ ಪ್ರಶಾಂತ್ ಗೆ ತನ್ನ ಮಗಳಿಗೆ ಫೋನ್ ಮಾಡಬೇಡ, ಅವಳ ಹಿಂದೆ ಹೋಗಬೇಡ ಎಂದು ಬುದ್ದಿ ಹೇಳಿದ್ದರು. ಬುದ್ದಿ ಹೇಳಿದ ಬಳಿಕವೂ ಪ್ರಶಾಂತ್ ತನ್ನ ಚಾಳಿಯನ್ನು ಮುಂದುವರಿಸಿದ್ದ. ಇದರಿಂದ ಬೇಸತ್ತ ಸಹನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ನಮ್ಮ ಮಗಳ ಆತ್ಮಹತ್ಯೆಗೆ ಪ್ರಶಾಂತ್ ಕಾರಣ ಎಂದು ಸಹನಾ ಪೋಷಕರಾದ ಸುಧಾಕರ್ ಹಾಗೂ ಮಮತ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಹನಾ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಪ್ರಶಾಂತ್ ನಾಪತ್ತೆಯಾಗಿದ್ದಾನೆ.

- Advertisement -

Related news

error: Content is protected !!