Sunday, June 29, 2025
spot_imgspot_img
spot_imgspot_img

ಕಾರು-ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರು ಮೃತ್ಯು

- Advertisement -
- Advertisement -

ಶಿವಮೊಗ್ಗ : ಸೊರಬ ತಾಲೂಕಿನ ಉಳವಿ ಸಮೀಪ ಅಪಘಾತ ಸಂಭವಿಸಿದ್ದು, ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಸುಹೇಲ್ (27), ಸಯ್ಯದ್ ಆಫ್ರಿದ್ ಅಲಿಯಾಸ್ ಪಿಂಟು (21) ಮೃತ ದುರ್ದೈವಿಗಳಾಗಿದ್ದಾರೆ. ಸಾಗರದ ರಾಮನಗರದ ನಿವಾಸಿಗಳಾದ ಇಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಮದುವೆಗೆಂದು ಉಳವಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ವ್ಯಾಗನರ್ ಕಾರು – ಬೈಕ್ ನಡುವೆ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ಇಬ್ಬರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ಇಬ್ಬರ ಮೃತದೇಹವನ್ನು ರವಾನೆ ಮಾಡಲಾಗಿದೆ.

- Advertisement -

Related news

error: Content is protected !!