


ವಿವಾಹಿತ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಕವನಾ ಮೃತ ಮಹಿಳೆ. ಕವನಾ 5 ವರ್ಷದಿಂದ ಹಿಂದೆ ಪ್ರೀತಿಸಿ ರುದ್ರೇಶ್ ಎಂಬಾತನನ್ನು ಮದುವೆಯಾಗಿದ್ದಳು.
ಆದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ 2 ವರ್ಷದಿಂದ ಗಂಡನ ಮನೆ ಬಿಟ್ಟು ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ರಿಪ್ಪನಪೇಟೆ ಪಟ್ಟಣದ ಸೂಪರ್ ಮಾರ್ಕೇಟ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.
ಮೊನ್ನೆ ರಾತ್ರಿ ಊಟಕ್ಕೆಂದು ಕಬಾಬ್ ಮತ್ತು ಅನ್ನ ಸಾಂಬರ್ ಮಾಡಿಕೊಂಡಿದ್ದ ಕವನ ಊಟ ಮಾಡಿಯೇ ಇಲ್ಲ. ಅವಳ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಿನ್ನೆ ಮಧ್ಯಾಹ್ನ ಸ್ನೇಹಿತೆಯೊಬ್ಬರು ಮನೆ ಹತ್ತಿರ ಹೋಗಿ ನೋಡಿದಾಗ ಮನೆ ಬಾಗಿಲು ಓಪನ್ ಆಗಿತ್ತು. ಒಳಗೆ ನೋಡಿದ್ರೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಕವನ ಸ್ನೇಹಿತೆ ತಕ್ಷಣ ಕುಟುಂಬಸ್ಥರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಅವಳ ಮೊಬೈಲ್ ಮಿಸ್ಸಿಂಗ್ ಆಗಿದೆ.
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.