Friday, June 5, 2026
spot_imgspot_img
spot_imgspot_img

ಹಳೆ ವೈಷಮ್ಯದ ಹಿನ್ನೆಲೆ ಯುವಕನನ್ನು ಕೊಲೆ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಚಿಕ್ರುಲ್ಲಾಖಾನ್(28) ಕೊಲೆಯಾದ ಯುವಕ. ನಿನ್ನೆ(ಮಾ.19) ರಾತ್ರಿ 6 ಜನ ದುಷ್ಕರ್ಮಿಗಳು ಫಲಕ್ ಶಾದಿಮಹಲ್ ಸಮೀಪ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಲ್ಲೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಚಿಕ್ರುಲ್ಲಾಖಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಪರಾರಿಯಾಗಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!