Friday, May 3, 2024
spot_imgspot_img
spot_imgspot_img

ಮದುವೆ ನಿಶ್ಚಯವಾಗಿದ್ದ ಯುವತಿ ನೇಣಿಗೆ ಶರಣು…!

- Advertisement -G L Acharya panikkar
- Advertisement -

ಮದುವೆಗೆ 13 ದಿನಗಳು ಬಾಕಿ ಇರುವಾಗಲೇ ಯುವತಿಯೋರ್ವಳು ಮನೆಯ ಸ್ನಾನದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.

ಚೈತ್ರ (26) ಮೃತ ಯುವತಿ. ಚೈತ್ರ ಮನೆಯ ಸ್ನಾನದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಚೈತ್ರಗೆ ಮುಂದಿನ ಫೆಬ್ರವರಿ 4 ರಂದು ವಿವಾಹ ನಿಶ್ಚಯವಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!