Friday, May 23, 2025
spot_imgspot_img
spot_imgspot_img

ಬೆಳ್ಳಿಪ್ಪಾಡಿ: ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ

- Advertisement -
- Advertisement -

ಬೆಳ್ಳಿಪ್ಪಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಿನಾಂಕ: 03-05-2025ನೇ ಶನಿವಾರದಂದು ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರಾಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ದಿನಾಂಕ: 02-05-2025ನೇ ಶುಕ್ರವಾರರಂದು ಸಾಯಂಕಾಲ ಗಂಟೆ 4.00ಕ್ಕೆ ಬೆಳ್ಳಿಪ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಿಂದ ಹೊರೆಕಾಣಿಕೆ ಹೊರಡಲಿದೆ.

ದಿನಾಂಕ: 03-05-2025ನೇ ಶನಿವಾರ ಬೆಳಿಗ್ಗೆ ಗಂಟೆ 8.30ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ, ದೈವಗಳಿಗೆ ತಂಬಿಲ ನಡೆಯಲಿದ್ದು, ಮಧ್ಯಾಹ್ನ 12.00 ರಿಂದ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.ಸಾಯಂಕಾಲ ಗಂಟೆ 5.00-6.00 ಶ್ರೀ ರಾಜಶ್ರೀ ಭಜನಾ ಮಂಡಳಿ ಅಂಬೆಲ 34ನೇ ನೆಕ್ಕಿಲಾಡಿ ಭಜನಾ ತಂಡ ಇವರಿಂದ ಕುಣಿತ ಭಜನಾ ಕಾರ್ಯಕ್ರಮ ಹಾಗೂ ಸಾಯಂಕಾಲ ಗಂಟೆ 6.00ಕ್ಕೆ ದೀಪಾರಾಧನೆ, ತ್ರಾಯಂಬಕ ನಡೆಯಲಿದೆ.ರಾತ್ರಿ ಗಂಟೆ 7.00ರಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಮಹೋತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲುಕಾಣಿಕೆ, ಪ್ರಸಾದ ವಿತರಣೆಯು ನಡೆಯಲಿದೆ.

- Advertisement -

Related news

error: Content is protected !!