Friday, May 23, 2025
spot_imgspot_img
spot_imgspot_img

“ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ ದರ್ಪದ ಗ್ಯಾರಂಟಿ”- ಶ್ರೀ ರಾಮುಲು

- Advertisement -
- Advertisement -

ಸಿ.ಎಂ ಸಿದ್ದರಾಮಯ್ಯರವರ ವರ್ತನೆಯ ವಿರುದ್ದ ಶ್ರೀರಾಮುಲುರವರು ಕಿಡಿಕಾರಿದ್ದಾರೆ.

“ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದು ಹೇಳಿಕೆ‌ ನೀಡಿ, ಪಾಕಿಸ್ತಾನದ ಮಾಧ್ಯಮದಲ್ಲಿ ಕೂಡ ಪ್ರಚಾರ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿಯೇ ಸಂಬೋಧಿಸಿ, ಅಧಿಕಾರಿಯ ಮೇಲೆ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೂಂಡಾ ವರ್ತನೆಯಾಗಿದೆ ಸಿದ್ದರಾಮಯ್ಯ ಅವರು ಹೀಗೆ ನಡೆದುಕೊಳ್ಳುತ್ತಿರುವುದು ಇದೇ ಮೊದಲೆನಲ್ಲಾ! ರಾಜ್ಯದ ಜನರಿಗೆ ಮಾದರಿಯಾಗಬೇಕಾದ ಸಿದ್ದರಾಮಯ್ಯ ಅವರ ನಡೆಯನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ತುಂಬಿದ ಸಭೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಕ್ಷಮೆ ಕೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಎತ್ತಿ ಹಿಡಿಯಲು ಆಗ್ರಹಿಸುತ್ತೇನೆ” ಎಂಬುದಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!