- Advertisement -
- Advertisement -
Lbbg6: ಬಂಟ್ವಾಳ ತಾಲೂಕಿನ ಕರೋಪಾಡಿ ಸಮೀಪದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ ಅವರು ಇಂದು (ಏಪ್ರಿಲ್ 04) ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಈ ವೇಳೆ ಸಂಜೆ 4.30ಕ್ಕೆ ನಡೆಯುವ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಭಕ್ತರನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ.ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುತ್ತಿರುವ ಈ ಮಹೋತ್ಸವಕ್ಕೆ ಭಕ್ತರ ಭಾರಿ ಸಂಖ್ಯೆ ಹರಿದುಬರುತ್ತಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸೇರ್ಪಡೆಯಾಗಿದೆ.
6 gh
- Advertisement -








