Friday, April 26, 2024
spot_imgspot_img
spot_imgspot_img

ಸುಶಾಂತ್ ಸಿಂಗ್ ಸಾವು ಪ್ರಕರಣ- ರಿಯಾ ಚಕ್ರವರ್ತಿಗೆ ಷರತ್ತುಬದ್ದ ಜಾಮೀನು ಮಂಜೂರು

- Advertisement -G L Acharya panikkar
- Advertisement -

ಮುಂಬೈ: ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ಟೆಂಬರ್ 8 ರಂದು ಎನ್ ಸಿಬಿ ವಿಚಾರಣೆಗೆ ಹಾಜರಾಗಿದ್ದ ವೇಳೆಯಲ್ಲಿ ರಿಯಾ ಚಿಕ್ರವರ್ತಿಯನ್ನು ಬಂಧಿಸಲಾಗಿತ್ತು. ಸುಶಾಂತ್ ಸಿಂಗ್ ಸಾವಿನ ತನಿಖೆಯ ವೇಳೆಯಲ್ಲಿ ಡ್ರಗ್ಸ್ ಪ್ರಕರಣದ ಆರೋಪವೂ ರಿಯಾ ಚಕ್ರವರ್ತಿಯ ವಿರುದ್ದ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಸಿಬಿ ವಿಶೇಷ ನ್ಯಾಯಾಲಯ ರಿಯಾ ಚಕ್ರವರ್ತಿ ಸೇರಿದಂತೆ 20 ಮಂದಿ ಆರೋಪಿಗಳಿಗೆ ಅಕ್ಟೋಬರ್ 20ರ ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು.

ಎನ್ ಸಿಬಿ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲೀಗ ರಿಯಾ ಚಕ್ರವರ್ತಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.

- Advertisement -

Related news

error: Content is protected !!