Saturday, June 28, 2025
spot_imgspot_img
spot_imgspot_img

ಸಿದ್ದರಾಮಯ್ಯ ಸಿಎಂ: ಮತ್ತೊಮ್ಮೆ ಕರುನಾಡಿನ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆ ಸಿದ್ದು..!

- Advertisement -
- Advertisement -

ಕುತೂಹಲ ಕೆರಳಿಸಿದ ಕರ್ನಾಟಕ ಸಿಎಂ ಗದ್ದುಗೆ ಸಿದ್ದು ಪಾಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕರ್ನಾಟಕ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಘೋಷಣೆ ಆಗಲಿದೆ ಎಂಬ ಮಾಹಿತಿಗಳು ತಿಳಿದುಬಂದಿದೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಇಂದು ಉನ್ನತ ಮಟ್ಟದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ತೀವ್ರ ಒತ್ತಡವನ್ನೇರಿದ್ದರು.

ಕಳೆದ ನಾಲ್ಕು ದಿನಗಳಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದ್ದು, ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷರಾಗಿಯು ಅವರು ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್ ನ ಅಧಿಕೃತ ಘೋಷಣೆಯೊಂದು ಬಾಕಿಯಿದೆ.

- Advertisement -

Related news

error: Content is protected !!