Thursday, May 2, 2024
spot_imgspot_img
spot_imgspot_img

ಹೊತ್ತಿ ಉರಿದ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ ಜೈವಿಕ ವನ!

- Advertisement -G L Acharya panikkar
- Advertisement -

ತುಮಕೂರು: ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ ಜೈವಿಕ ವನ ಹೊತ್ತಿ ಉರಿದಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರು ತಾಲೂಕು ಬಸ್ತಿ ಬೆಟ್ಟದ ಬಳಿ ಸಿದ್ದಗಂಗಾ ಸಂಸ್ಥೆಗೆ ಸೇರಿದ ಗಿಡಮೂಲಿಕೆ ಬೆಳೆಯುತ್ತಿದ್ದ ಜೈವಿಕ ವನಕ್ಕೆ ಬೆಂಕಿ ಬಿದ್ದಿದೆ.

ಈ ವನದಲ್ಲಿ ಹಲವು ರೋಗಗಳ ಮೇಲೆ ಪ್ರಭಾವ ಬೀರುವ ಗಿಡಮೂಲಿಕೆಗಳನ್ನ ಬೆಳೆಸಲಾಗುತ್ತಿತ್ತು. ಇದೀಗ ಈ ವನಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶಗೊಂಡಿದೆ.

- Advertisement -

Related news

error: Content is protected !!