Monday, June 30, 2025
spot_imgspot_img
spot_imgspot_img

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ: ಸಿಎಂ ಸಿದ್ದರಾಮಯ್ಯ ಕೃಷ್ಣರಾಜಸಾಗರ ಅಣೆಕಟ್ಟಿಗೆ ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಡ್ಯಾಂ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ.

ದೇವರಾಜ ಅರಸು ಕಾಲದಲ್ಲಿ 1979 ರಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾರು ಬಾಗಿನ ಸಲ್ಲಿಸಿಲ್ಲ. ಹೀಗಾಗಿ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

ಬಾಗಿನ ಕಾರ್ಯಕ್ರಮ ಹಿನ್ನೆಲೆ ಕನ್ನಡ ಬಾವುಟದಿಂದ ಕನ್ನಂಬಾಡಿ ಕಟ್ಟೆಯನ್ನು ಶೃಂಗರಿಸಲಾಗಿತ್ತು. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು.

ಸಿಎಂ ಜೊತೆಗೆ ಕಾವೇರಿ ಮಾತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು. ಸಿಎಂಗೆ ಸಚಿವರಾದ, ಚಲುವರಾಯಸ್ವಾಮಿ, ಮಹದೇವಪ್ಪ, ಬೋಸರಾಜು, ವೆಂಕಟೇಶ್ ಹಾಗೂ ಶಾಸಕರು ಸಾಥ್‌ ನೀಡಿದರು.

- Advertisement -

Related news

error: Content is protected !!