Tuesday, August 11, 2026
spot_imgspot_img
spot_imgspot_img

ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ಬಂದಿದ್ದು, ಇದೀಗ ಚುನಾವಣಾ ಆಯೋಗ ಆ.8ಕ್ಕೆ ಇದ್ದ ಮನೆ ಮನೆ ಪರಿಶೀಲನೆಯನ್ನು ಆಗಸ್ಟ್ 17ರವರೆಗೂ ವಿಸ್ತರಣೆ ಮಾಡಿ ಆದೇಶ ನೀಡಿದೆ.

ಇದರ ಮದ್ಯೆ ಆತಂಕ ಪಡುವಂತಹ ವಿಚಾರ ಬಯಲಾಗಿದೆ. ಬೆಂಗಳೂರಿನಲ್ಲಿ 49 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 1.3 ಕೋಟಿ ಮತದಾರರು ಇದ್ದು, ಅದರಲ್ಲಿ ಡೆತ್ ಆದವರು, ಶಿಫ್ಟ್ ಆದವರು, ಈಗಾಗಲೇ ಎನ್ರೋಲ್ ಆಗಿರುವರು, ಶಾಶ್ವತವಾಗಿ ಬೇರೆ ಕಡೆ ಹೋಗಿರವವರನ್ನು 49 ಲಕ್ಷ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ 49 ಲಕ್ಷ ಮತದಾರರು ಹೆಸರು ಡೀಲಿಟ್ ಆಗುವ ಸಾಧ್ಯತೆ ಇದ್ದು, ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಎಡಿಎಸ್‌ಎಸ್‌ಒ ಅಂತಾ ಗುರುತು ಮಾಡಿರೋ ಪ್ರಕರಣಗಳನ್ನು ಮಾರ್ಕ್ ಮಾಡಿ ಮಹಜರು ಮಾಡಲು ಸೂಚನೆ ನೀಡಲಾಗಿದೆ. ಜೊತೆಗೆ ಎರಡೆರಡು ಬಾರಿ ಮಾರ್ಕಿಂಗ್ ಮಾಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಇದ್ದ ವಿದ್ಯಾರ್ಥಿಗಳು, ಸೈನಿಕರು, ಬೇರೆ ರಾಜ್ಯದಿಂದ ವೃತ್ತಿಗೆಂದು ಬಂದವರು ತುಂಬಾ ಮಂದಿ ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಆಗಾಗಿ ಮತದಾರರು ತುಂಬಾ ಜನ ಡೀಲಿಟ್ ಆಗ್ತಾ ಇದ್ದಾರೆ. ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸುಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ ರಾವ್ ಅವರು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!