ವಿಮಾನನಿಲ್ದಾಣದಲ್ಲಿ ಏರ್ಪೋರ್ಟ್ ಅಧಿಕಾರಿಯೊಬ್ಬರು 60ಕ್ಕೂ ಹೆಚ್ಚು ಬಾರಿ ಚಿನ್ನ ಕಳ್ಳಸಾಗಾಣೆದಾರರಿಗೆ ಸಹಾಯ ಮಾಡಿದ ಘಟನೆ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಆರೋಪಿಯನ್ನು ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ನವೀನ್ ಕುಮಾರ್ ಎಂದು ತಿಳಿದು ಬಂದಿದೆ. ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದವರಿಗೆ ಸಹಾಯ ಮಾಡಲು ಯತ್ನಿಸಿದಾಗ ಆರೋಪಿ ಸಿಕ್ಕಿಬಿದ್ದಿದ್ದು, ಆರೋಪಿ ಕಸ್ಟಮ್ಸ್ ಅಧಿಕಾರಿ ಮತ್ತು ಲಗೇಜ್ ನಿರ್ವಹಿಸುವ ಹೊರಗುತ್ತಿಗೆ ಉದ್ಯೋಗಿ ಶರಫಲಿ ಎಂಬಾತನ ಸಹಾಯದಿಂದ ಸುಮಾರು 60 ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಾನೆ. ಪ್ರತಿ ಬಾರಿ 60,000 ರೂ.ಗಳನ್ನು ಲಂಚವಾಗಿ ಪಡೆದಿದ್ದಾನೆ. ಅಲ್ಲದೇ ಆರೋಪಿ ಈ ವಿಚಾರವಾಗಿ ಸಾಗಾಣಿಕೆದಾರರೊಂದಿಗೆ ಸಂಪರ್ಕಿಸಲು ಮೂರು ಸಿಮ್ಗಳನ್ನು ಬಳಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಲಪ್ಪುರಂ ಪೊಲೀಸರು ಆತನ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು,ಲಂಚ ಪಡೆದ ಆರೋಪದ ಮೇಲೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.