- Advertisement -
- Advertisement -
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ವಿರೋಧಿಸಿ ರೈತರು ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಹುಟ್ಟು ಹಬ್ಬ ಆಚರಣೆ ರದ್ದುಪಡಿಸಿದ್ದಾರೆ. ದೇಶದಲ್ಲಿ ಕೊರೋನಾ ಮಹಾಮಾರಿ ಕೂಡ ಆತಂಕ ನಿರ್ಮಿಸಿದ್ದು, ಈ ವೇಳೆ ಹುಟ್ಟು ಹಬ್ಬ ಆಚರಣೆ ಸೂಕ್ತವಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಡಿಸೆಂಬರ್ 9 ಸೋನಿಯಾಗಾಂಧಿ ಅವರ ಹುಟ್ಟು ಹಬ್ಬ. ರೈತರು ಹೋರಾಟ ಮಾಡುತ್ತಿದ್ದಾರೆ. ಪರಿಸ್ಥಿತಿ ಪೂರಕವಾಗಿಲ್ಲ. ಈ ಸಂದರ್ಭದಲ್ಲಿ ಹುಟ್ಟು ಹಬ್ಬ ಆಚರಣೆ ಸೂಕ್ತವಲ್ಲ ಎಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಪಕ್ಷದ ರಾಜ್ಯ ಘಟಕಗಳಿಗೆ ಪತ್ರ ಬರೆದಿದ್ದಾರೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವುದು ಸೇರಿದಂತೆ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳದಂತೆ ಅವರು ಸೂಚನೆ ನೀಡಿದ್ದಾರೆ.
- Advertisement -