


ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಕುಹುಕವಾಡಿದ್ದರು. ಹೀಗಾಗಿ ಬಾಯ್ಕಾಟ್ ಬಿಸಿ ಮುಟ್ಟಿಸಿದ್ದರು. ಇದೀಗ ಸಮಸ್ತ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ಕರ್ನಾಟಕ ಮತ್ತು ಕನ್ನಡಿಗರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದ್ರೂ ನೋವಾಗಿದ್ರೆ, ಯಾರದ್ದಾದರೂ ಭಾವನೆಗಳಿಗೆ ಧಕ್ಕೆ ಉಂಟಾಗಿದ್ರೆ ಕ್ಷಮೆ ಕೇಳುತ್ತೇನೆ. ಫೋನ್ ಪೇ ಬೆಳವಣಿಗೆಗೆ ಬೆಂಗಳೂರು ಕೊಡುಗೆ ಅಪಾರವಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಳೆದ ವಾರ ನಾನು ನೀಡಿದ ವೈಯಕ್ತಿಕ ಹೇಳಿಕೆಗೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿರುವುದನ್ನು ಮಾಧ್ಯಮ ವರದಿಗಳನ್ನು ಓದಿದ್ದೇನೆ. ಕರ್ನಾಟಕವನ್ನು ಮತ್ತು ಕನ್ನಡಿಗರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ ಎಂಬುವುದನ್ನು ಪ್ರಮುಖವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದಿದ್ದಾರೆ.
.