Monday, April 29, 2024
spot_imgspot_img
spot_imgspot_img

ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ

- Advertisement -G L Acharya panikkar
- Advertisement -

ಜನರು ಬೊಟ್ಟು ಮಾಡುತ್ತಿರುವ ಆ ವ್ಯಕ್ತಿಗಳು ಯಾರು..!?

ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಹೋರಾಟದ ಕಿಚ್ಚು ಹೊತ್ತಿಸಿದೆ. ಆರೋಪಿಯಾಗಿದ್ದ ಸಂತೋಷ್‌ರಾವ್ ಅವರನ್ನು ಸಿಬಿಐ ಕೋರ್ಟ್ ನಿರ್ದೋಷಿ ಎಂದು ಬಿಡುಗಡೆ ಮಾಡಿದೆ. ಹಾಗಾದರೆ ಸೌಜನ್ಯಾಳನ್ನು ಕೊಂದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗೇ ಉಳಿದಿದೆ. ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ಈವರೆಗೂ ನ್ಯಾಯ ಸಿಕ್ಕಿಲ್ಲ. ಮಾನಸಿಕ ಅಸ್ವಸ್ಥರನ್ನು ಈ ಕೇಸ್‌ನಲ್ಲಿ ಸಿಕ್ಕಿಸಲಾಗಿತ್ತು ಎನ್ನುವ ಆರೋಪ ಮಾಡುತ್ತಿರುವ ಜನ ಬೊಟ್ಟು ಮಾಡುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ಎನ್ನುವುದು ಈಗಿನ ವಿಚಾರವಾಗಿದೆ.

ಧರ್ಮಸ್ಥಳ ದೇವಸ್ಥಾನದ ಕಚೇರಿ ಸಿಬ್ಬಂದಿ ಮಲ್ಲಿಕ್ ಜೈನ್, ಧರ್ಮಸ್ಥಳದ ಆವರಣದಲ್ಲಿನ ಅಂಗಡಿ ಮಾಲೀಕ ಧೀರಜ್ ಜೈನ್, ಧರ್ಮಸ್ಥಳದಲ್ಲಿ ಆಟೋ ಡ್ರೈವರ್ ಆಗಿದ್ದ ಉದಯ್ ಜೈನ್ ಹಾಗೂ ವೀರೇಂದ್ರ ಹೆಗ್ಗಡೆ ಅವರ ತಮ್ಮನ ಮಗ ನಿಶ್ಚಲ್ ಜೈನ್ ವಿರುದ್ಧ ಮರು ತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ, ಈ ನಾಲ್ವರ ವಿರುದ್ಧ ಸಿಬಿಐ ಮತ್ತು ಸಿಐಡಿ ತನಿಖೆಯಲ್ಲಿಯೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.

ಆದರೆ, ಜನರು ಈ ನಾಲ್ವರ ವಿರುದ್ಧ ಬೊಟ್ಟು ಮಾಡಿ ಮರು ತನಿಖೆ ಮಾಡುವಂತೆ ಸರ್ಕಾರದ ವಿರುದ್ಧ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ, ಸೌಜನ್ಯ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಎಡವಟ್ಟುಗಳಿಂದ ಪ್ರಕರಣದ ಹಾದಿ ತಪ್ಪಿದೆ ಎಂದು ಆಗ್ರಹಿಸುತ್ತಿದ್ದಾರೆ. ಇನ್ನಾದ್ರೂ ಈ ಪ್ರಕರಣ ಮರು ತನಿಖೆಗೊಳಪಟ್ಟು ನೈಜ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗುತ್ತಾ..? ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಬಹುದು..? ಅಮಾಯಕ ಹೆಣ್ಣು ಮಗಳು ಸೌಜನ್ಯಳಿಗೆ ನ್ಯಾಯ ಸಿಗಬಹುದೇ..? ಕಾದುನೋಡಬೇಕಷ್ಟೇ..!

- Advertisement -

Related news

error: Content is protected !!