Sunday, June 29, 2025
spot_imgspot_img
spot_imgspot_img

ಪೂಂಜಾ ಬಂಧನ ಹೈಡ್ರಾಮ ಸೇರಿದಂತೆ ಹಲವು ಪ್ರಕರಣಗಳ ಬಗ್ಗೆ ಎಸ್‌ ಪಿ ಸ್ಪಷ್ಟನೆ: ಪತ್ರಿಕಾಗೋಷ್ಠಿ

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಬಂಧನ ಪ್ರಕರಣದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ರಿಷ್ಯಂತ್‌ ಸಿ.ಬಿ. ಹಲವು ಪ್ರಕರಣಗಳ ಬಗ್ಗೆ ಸ್ಪಷ್ಟೀಕರಣ ನೀಡಿದರು.

ಪೂಂಜಾ ಅವರ ಮನೆಗೆ ಆರಂಭದಲ್ಲಿ ನೋಟೀಸ್‌ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ, ಜನ ಸೇರಿದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಹಾಗಂತ ಪೊಲೀಸರು ಅಲ್ಲಿಂದ ಓಡಿ ಹೋಗಿದ್ದಲ್ಲ. ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ ಅಲ್ಲಿ ಜನ ಕ್ಲಿಯರ್‌ ಆಗುತ್ತದೆ ಮುಂದೆ ನಾವು ಠಾಣೆಗೆ ಹಾಜರಾಗುವುದಾಗಿ ತಿಳಿಸಿದ್ದರಿಂದ ನಾವು ಬಂದಿದ್ದೇವೆ. ಶಾಸಕರ ಒಂದು ಕೇಸ್ ಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಕಾನೂನು ಎಲ್ಲರಿಗೂ ಒಂದೇ ಅಲ್ಲಿ 500 ಮಂದಿ ಸೇರಿಸಿದರೂ ಅಥವಾ 1 ಲಕ್ಷ ಮಂದಿ ಸೇರಿದರೂ ಒಂದೇ ಎಂದರು. ಶಾಸಕರು ಕಾನೂನಿಗೆ ತಲೆಬಾಗಲೇ ಬೇಕು. ನೋಟೀಸ್‌ನೀಡಿದ್ದೇವೆ, ಸಮಯ ಕೇಳಿದ್ದಾರೆ, ಉಳಿದಂತೆ ಅವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಬೆಳ್ತಂಗಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸ್ಥಳದಲ್ಲಿ ಕೆಲಸಗಾರರು ಹೇಳಿದಂತೆ ಸಂಬಂಧಪಟ್ಟ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಮಾಯಕರು ಎನ್ನುವುದು ತಪ್ಪು, ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಹಾಗಾಗುವುದಿಲ್ಲ, ನ್ಯಾಯಾಲಯಕ್ಕೆ ಬೇಕಾಗಿರುವುದು ಸಾಕ್ಷಿ, ಅದಕ್ಕೆ ಬೇಕಾದ ಸಾಕ್ಷಿ ನೀಡುತ್ತೇವೆ. ಅಲ್ಲಿ ಒಂದು ಖಾಸಗಿ ಸ್ಥಳವಿದ್ದು, ಮತ್ತೊಂದು ವರ್ಗ ಸ್ಥಳ, ತಹಶೀಲ್ದಾರ್‌ ಪರಿಶೀಲಿಸಿ ವರದಿ ನೀಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ತಿಳಿಸಿದರು.

ಸೈಬರ್ ಕ್ರೈಮ್ ಗಳ ಬಗ್ಗೆ ಮಾತನಾಡಿದ ಅವರು, ನಿಮಗೆ ಹಣ ಹಾಕಿ ಆಮೇಲೆ ಹಣ ದೋಚ್ತಾರೆ. ಜಾಹೀರಾತು ಕ್ಲಿಕ್ ಮಾಡಿ ಮೋಸ ಹೋಗಬೇಡಿ. ನಿಮ್ಮ ಅಕೌಂಟ್ ಗೆ ಕನ್ನ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಮ್ಮ ಮೇಲೆ ಕೇಸಿದೆ, ನಿಮಗೊಂದು ಪಾರ್ಸೆಲ್ ಬಂದಿದೆ ಅಂತ ಹಲವು ಜಾಲಗಳಲ್ಲಿ ನಿಮ್ಮನ್ನು ಸಿಲುಕಿಸಿವಂತಹ ಪ್ರಯತ್ನಗಳು ನಡೀತಾ ಇದೆ. ಇಂತಹ ಸೈಬರ್ ಕ್ರೈಮ್ ಗಳ ಬಗ್ಗೆ ಎಚ್ಚರ ಇರಲಿ ಎಂದರು.

- Advertisement -

Related news

error: Content is protected !!