Thursday, May 2, 2024
spot_imgspot_img
spot_imgspot_img

ನಿನ್ನೆ ರಾತ್ರಿ ಬೆಂಗಳೂರು ತಲುಪಿದ ಸ್ಪಂದನಾ ಮೃತದೇಹ; ತಡರಾತ್ರಿಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ-ಹರಿಶ್ಚಂದ್ರ ಘಾಟ್‌ನಲ್ಲಿ ಅಂತಿಮ ಸಂಸ್ಕಾರ

- Advertisement -G L Acharya panikkar
- Advertisement -

ಬೆಂಗಳೂರು:ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ಥಾಯ್‌ ಏರ್‌ವೇಸ್ ಮೂಲಕ ಬ್ಯಾಂಕಾಕ್‌ನಿಂದ ಹೊರಟ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ರಾತ್ರಿ 11:50ರ ವೇಳೆಗೆ ಆಗಮಿಸಿದೆ. ಥಾಯ್‌ ಏರ್‌ವೇಸ್‌ನ ವಿಮಾನ ಬ್ಯಾಂಕಾಕ್‌ ಸುವರ್ಣಭೂಮಿ ವಿಮಾನ ನಿಲ್ದಾಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಬೆಂಗಳೂರಿನತ್ತ ಹೊರಟಿತು.

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹಾಗೂ ಇತರ ಕುಟುಂಬ ಸದಸ್ಯರು ಹಾಜರಿದ್ದಾರೆ. ಸಾರ್ವಜನಿಕ ದರ್ಶನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ವಿಮಾನ ನಿಲ್ದಾಣದಿಂದ ಸ್ಪಂದನಾ ಮೃತದೇಹವನ್ನು ಮಲ್ಲೇಂಶ್ವರದಲ್ಲಿರುವ ಬಿಕೆ ಶಿವರಾಮ್ ನಿವಾಸಕ್ಕೆ ತರಲಾಗಿದ್ದು, ರಾತ್ರಿ 1 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇಂದು ಮಧ್ಯಾಹ್ನ 2ರಿಂದ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆ ಹೊತ್ತಿಗೆ ಹರಿಶ್ಚಂದ್ರ ಘಾಟ್‌ನಲ್ಲಿ ಈಡಿಗ ಸಮುದಾಯದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Related news

error: Content is protected !!