Friday, May 3, 2024
spot_imgspot_img
spot_imgspot_img

ವೀರಕಂಭ: (ಜ.22) ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ

- Advertisement -G L Acharya panikkar
- Advertisement -

ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವವು ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ಪುರೋಹಿತರಾದ ಶ್ರೀ ಉದಯ ಭಟ್ ನಂದಾವರ ರವರ ನೇತೃತ್ವದಲ್ಲಿ ಅಯೋಧ್ಯ ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ನಡೆಯಲಿದೆ.

ಬೆಳಿಗ್ಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಸತ್ಯಸುಂದರ ಭಟ್ ಕಲ್ಮಲೆ ದೀಪ ಪ್ರಜ್ವಲನೆಗೈಯಲಿದ್ದಾರೆ. ಬಳಿಕ ಪೂಜೆ ಆರಂಭಗೊಳ್ಳಲಿದೆ. ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿ ಕೆಲಿಂಜ, ಶ್ರೀ ಶಾರದಾ ಭಜನಾ ಮಂಡಳಿ ವೀರಕಂಭ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಜ್ಜಿನಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11.30 ಕ್ಕೆ ಶ್ರೀ ರಾಮ ತಾರಕ ಮಂತ್ರ ಪಠಣೆ ಬಳಿಕ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.

ಮಧ್ಯಾಹ್ನ ನಡೆಯುವ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಗತಿಪರ ಕೃಷಿಕ ಜಯಶ್ಯಾಂ ನೀರ್ಕಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕ ಶಿಕ್ಷಕ ಗೋಪಾಲ ಕೃಷ್ಣ ನಾಯಕ್ ಪುಣಚ, ಚಂದ್ರಶೇಖರ ಬಂಗೇರ ಬಾಯಿಲ ಮಂತ್ರಾಕ್ಷತೆ ವಿತರಣಾ ಮಂಡಲ ಪ್ರಮುಖರು ವೀರಕಂಭ, ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಚೇತನ್ ಶೆಟ್ಟಿ ಪೆಲತ್ತಡ್ಕ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.
ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡ ಕರಸೇವಕರಿಗೆ ಗೌರವಾರ್ಪಣೆ ನಡೆಯಲಿದೆ.

- Advertisement -

Related news

error: Content is protected !!