Sunday, May 19, 2024
spot_imgspot_img
spot_imgspot_img

ಕಾಂಗ್ರೆಸ್‌ ಕಾರ್ಯಕರ್ತನಿಗೆ ಚಾಕು ಇರಿತ; ಗಂಭೀರ ಗಾಯ

- Advertisement -G L Acharya panikkar
- Advertisement -

ರಾಜ್ಯದ ವಿವಿಧೆಡೆ ಮತದಾನೋತ್ತರ ಹಿಂಸಾಚಾರ ಪ್ರಕರಣಗಳು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ ಕಾರ್ಯಕರ್ತನಿಗೆ ಜೆಡಿಎಸ್ ಕಾರ್ಯಕರ್ತರು ಚಾಕು ಇರಿದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಜಮುಲ್ ಗಾಯಗೊಂಡ ಕಾಂಗ್ರೆಸ್‌ ಕಾರ್ಯಕರ್ತ.

ಜೆಡಿಎಸ್ ಮುಖಂಡ ಸಾಧಿಕ್, ಆರೀಫ್ ಸೇರಿ ನಾಲ್ವರ ವಿರುದ್ಧ ಚಾಕು ಇರಿತ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಕಾಂಗ್ರೆಸ್‌ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ.

ಆಸ್ಪತ್ರೆಗೆ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಕೆ.ಆರ್‌. ರಮೇಶ್ ಕುಮಾರ್ ಹಾಗೂ ಕೋಲಾರ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಘಟನೆ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆ ಬಳಿ ಮುನ್ನೆಚ್ಚರಿಕೆಯಿಂದ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

- Advertisement -

Related news

error: Content is protected !!