Sunday, June 29, 2025
spot_imgspot_img
spot_imgspot_img

ಕಾಲುವೆಯಲ್ಲಿ ಈಜಲು ಹೋಗಿದ್ದ SSLC ವಿದ್ಯಾರ್ಥಿ ನೀರು ಪಾಲು..!!

- Advertisement -
- Advertisement -

ಕಾಲುವೆಯಲ್ಲಿ ಈಜಲು ಹೋಗಿದ್ದ ಯುವಕ‌ ನೀರು ಪಾಲಾಗಿರೋ ಘಟನೆ ರಾಯಚೂರು ಲಿಂಗಸುಗೂರು ತಾಲೂಕಿನ ಪೂಲಭಾವಿ ಬಳಿ ನಡೆದಿದೆ. ನೀರು ಪಾಲಾದ ಯುವಕನನ್ನು SSLC ಓದುತ್ತಿದ್ದ ವಿದ್ಯಾರ್ಥಿ ಅಮರೇಶ್ (16) ಎಂದು ಗುರುತಿಸಲಾಗಿದೆ.

ಲಿಂಗಸುಗೂರು ತಾಲೂಕಿನ ಹೊನ್ನಳ್ಳಿ ಗ್ರಾಮದ ಅಮರೇಶ ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಲುವೆ ಬಳಿ ಹೋಗಿದ್ದಾರೆ. ಇದೇ ಸಮಯಕ್ಕೆ ರೈತರ ಒತ್ತಾಯದ ಮೇರೆಗೆ ಕಾಲುವೆಗೆ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ರಭಸ ಒಂದೇ ಬಾರಿ ಏರಿಕೆಯಾಗಿದೆ.

ಕಾಲುವೆಗೆ ನೀರು ಬಿಡುವ ಮಾಹಿತಿ ಇಲ್ಲದೇ ಅಮರೇಶ ಈಜಾಡಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಘಟನೆ ನಡೆದು 24 ಗಂಟೆಯಾದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ವಿದ್ಯಾರ್ಥಿಯನ್ನು ಹುಡುಕಿಕೊಡುವಂತೆ ಅಮರೇಶನ ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!