Saturday, June 28, 2025
spot_imgspot_img
spot_imgspot_img

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ; ಹೆಬ್ರಿ ಮೂಲದ ಯುವತಿ ಸಾವು..!

- Advertisement -
- Advertisement -

ಹೆಬ್ರಿ: 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಟ್ರೋಪಿ ಗೆದ್ದ ಸಂಭ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರಕಾರ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಆಚರಿಸಲಾಯಿತು. ಆದರೆ, ಜನ ದಟ್ಟಣೆಯ ಸರಿಯಾದ ನಿರ್ವಹಣೆ ಕೊರತೆಯಿಂದಾಗಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಹೆಬ್ರಿ ಇಂದಿರಾನಗರ ಮದಗಮನೆ ಶಾಂತ ಶೆಟ್ಟಿ ಮತ್ತು ಉಪ್ಪಿನಂಗಡಿ ಕರುಣಾಕರ ಶೆಟ್ಟಿ ದಂಪತಿಯ ಪುತ್ರಿ ಚಿನ್ಮಯಿ ಶೆಟ್ಟಿ (19) ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಕುಟುಂಬ ಬೆಂಗಳೂರು ತಿಪ್ಪಸಂದ್ರದಲ್ಲಿ ವಾಸವಿದ್ದು, ಚಿನ್ಮಯಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ಆರ್‌ಸಿಬಿ ತಂಡದ ವಿಜಯ ಸಂಭ್ರಮಾಚರಣೆಗೆ ಚಿನ್ಮಯಿ ಹೋಗಿದ್ದು ಕಾಲ್ತುಳಿತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ.

ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ಗಾಯಾಳುಗಳ ವಿವರ: ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ (ವಿಕ್ರಂ ಆಸ್ಪತ್ರೆ)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!