Saturday, June 28, 2025
spot_imgspot_img
spot_imgspot_img

ಕಾಲ್ತುಳಿತ ಪ್ರಕರಣ- ಇಂದಿನಿಂದ ಸಿಐಡಿ ತನಿಖೆ

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ ಕೇಸ್ ಫೈಲನ್ನು ಕಬ್ಬನ್ ಪಾರ್ಕ್ ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕಾಲ್ತುಳಿತ ಉಂಟಾದ ಸ್ಥಳಕ್ಕೆ ಸಿಐಡಿ ತಂಡ ಭೇಟಿ ನೀಡಲಿದೆ.

ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21ರ ಬಳಿ ಸಿಐಡಿ ತಂಡ ಪರಿಶೀಲನೆ ನಡೆಯಲಿದೆ. ಘಟನಾ ಸ್ಥಳ ಪರಿಶೀಲನೆ ಬಳಿಕ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಐಡಿ ತಂಡ ತಯಾರಿ ನಡೆಸಲಿದೆ. ಬಹುತೇಕ ಸೋಮವಾರ ಬಾಡಿ ವಾರೆಂಟ್ ಮೇಲೆ ಬಂಧಿತ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಜೂ.4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 11 ಜನ ಮೃತಪಟ್ಟಿದ್ದರು.

- Advertisement -

Related news

error: Content is protected !!