Saturday, June 28, 2025
spot_imgspot_img
spot_imgspot_img

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.

ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದು, ವಕೀಲರಾದ ಹೇಮಂತ್ ರಾಜ್, ಜಿ.ಆರ್.ಮೋಹನ್ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು. ಭದ್ರತಾ ಲೋಪವಾಗಿದೆ ಎಂದು ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ.

ಜನರ ಸಾವು ನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

- Advertisement -

Related news

error: Content is protected !!