Saturday, April 20, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 9366 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 308, ಉಡುಪಿ 120 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 93 ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 9366 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 494356 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 383077 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3799 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 34 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2184 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 41053 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 308 ಮಂದಿಗೆ ಸೋಂಕು ತಗುಲಿದೆ. ಇಂದು 9 ಮಂದಿ  ಕೊರೊನಾಗೆ ಬಲಿಯಾಗಿದ್ದಾರೆ. 398 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 18866 ಆಗಿದ್ದು, ಇಲ್ಲಿಯವರೆಗೆ 14006 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4401 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 461 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 120 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 14398 ಆಗಿದ್ದು ,ಇಲ್ಲಿಯವರೆಗೆ 12907 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1358 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!