Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಇಂದು 7184 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 172, ಉಡುಪಿ 210 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 71 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7184 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,71 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 758574 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 637481 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3371 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 14 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 4251 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 64770 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 172 ಮಂದಿಗೆ ಸೋಂಕು ತಗುಲಿದೆ.212 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28131 ಆಗಿದ್ದು, ಇಲ್ಲಿಯವರೆಗೆ 24016 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3485 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 628 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 210 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 20679 ಆಗಿದ್ದು ,ಇಲ್ಲಿಯವರೆಗೆ 18578 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1928 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!